Posts Tagged ‘ಅಂಬೇಡ್ಕರ್’

“ನಾಗಸಿಧ್ಧಾರ್ಥ ಹೊಲೆಯಾರ್”, ವೈಚಾರಿಕ ಸಾಹಿತ್ಯದ ಹೊಸನೀರು


ಖ್ಯಾತ ತತ್ವಶಾಸ್ತ್ರಜ್ಙ ಹೆಚ್.ಡ್ರಮಂಡ್ ವೈಚಾರಿಕತೆಗೆ ಸಂಬಂಧಿಸಿದಂತೆ ಒಂದೆಡೆ ಹೀಗೆ ಹೇಳುತ್ತರೆ. ಬಾಬಾಸಾಹೇಬ್ ಅಂಬೇಡ್ಕರ್ರವರು ತಮ್ಮ “ಜಾತಿ ನಿಮರ್ೂಲನೆ” ಎಂಬ ಕೃತಿಯ ಮುನ್ನುಡಿಯಲ್ಲಿ ಡ್ರಮಂಡ್ರ ಈ  ಸಾಲುಗಳನ್ನು ಬಳಸಿಕೊಳ್ಳುತ್ತ್ತಾರೆ ಆ ಅದ್ಭುತ ಸಾಲುಗಳು ಇಂತಿವೆ.”ವಿಚಾರ ಮಾಡಲೊಲ್ಲದವನು ಮತಾಂಧ, ವಿಚಾರ ಮಾಡಲರಿಯದವನು ಮೂರ್ಖ, ವಿಚಾರ ಮಾಡಲಂಜುವವನು ಗುಲಾಮ”. ಬಹುಶಃ ವೈಚಾರಿಕತ ೆಅಧಾರಿತ ಸಮಾಜದ ದೃಷ್ಡಿಕೋನ ಹೇಗಿರಬೇಕೆಂಬುದಕ್ಕೆ  ಡ್ರಮಂಡ್ರ ಈ ಸಾಲುಗಳು ಕನ್ನಡಿ ಹಿಡಿಯುತ್ತವೆ. ಇಂದು  ಚಾಮಾರಾಜನಗರದಲ್ಲಿ ಬಿಡುಗಡರೆಯಾಗುತ್ತಿರುವ  ನಾಗಸಿದ್ಧಾರ್ಥ ಹೊಲೆಯಾರರ ‘ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ದೃಷ್ಟಿಯಲ್ಲಿ ಕಲಿಯುಗ” ಎಂಬ ಕೃತಿ ಅಂತಹ ವೈಚಾರಿಕತೆಯ ಸಣ್ಣ ಬಿಂಬ ಎನ್ನಲಡ್ಡಿಯಿಲ್ಲ. ಈ ಹಿನ್ನೆಲೆಯಲ್ಲಿ ನಾಗಸಿದ್ಧಾರ್ಥ ಹೊಲೆಯಾರರ ಬದುಕು ಬರಹದ ಸಣ್ಣ ಚಿತ್ರಣ ಇಲ್ಲಿದೆ.
“ನಾಗಸಿದ್ಧಾರ್ಥ ಹೊಲೆಯಾರ್” ಎಂಬ ಕಾವ್ಯನಾಮದಿಂದ ಸಾಹಿತ್ಯ ಲೊಕಕ್ಕೆ ಪರಿಚಯವಾಗುತ್ತಿರುವ ಇವರ ಮೂಲ ಹೆಸರು ರಾಜಶೇಖರಮೂತರ್ಿ. ವೃತ್ತಿಯಲ್ಲಿ ಉಪತಹಸೀಲ್ದಾರರು, ಪ್ರವೃತ್ತಿಯಲಿ ಲೇಖಕ. ಲೇಖಕ ಅನ್ನುವದಕ್ಕಿಂತ ಸಂಶೋದಕ. ಆ ಸಂಶೋಧನೆಗೆ ಅಂಬೇಡ್ಕರ್ವಾದದ ನೆಲೆಗಟ್ಟಿದೆ. ಶೊಷಿತರ ಪರ ಕಾಳಜಿ ಇದೆ. ಸಾಮಾಜಿಕ ಹೊಣೆಗಾರಿಕೆಯ ನಿರತಂರ ತುಡಿತವಿದೆ.
ಸಿದ್ಧಾರ್ಥ ಹೊಲೆಯಾರರ ಜನ್ಮ ಸ್ಥಳ ಚಾಮಾರಾಜನಗರ ತಾಲ್ಲೂಕಿನ ಮಂಗಲ ಹೊಸುರು ಗ್ರಾಮ. ತಂದೆ ಎಸ್ ಬಸವಯ್ಯ, ತಾಯಿ ದೇವಾಜಮ್ಮ . ಇವರದು ಸುಶಿಕ್ಷಿತ ದಲಿತ ಕುಟುಂಬ. ಅಂತಹ ಶಿಕ್ಷಣದ ಸಂಸ್ಕಾರ ಇವರಿಗೆ ಅದುದರಿಂದಲೇ ಬಾಲ್ಯದಿಂದಲೆ ಇವರದು ಪ್ರಶ್ನಿಸುವ ಮನೋಭಾವ. ಕವನಗಳನ್ನು ಕಥೆಗಳನ್ನು ಬರೆಯುವ ಹುಚ್ಚು. ಸಮಾಜದ ಬದಲಾವಣೆಗೆ ತಹತಹಿಸುವ ಗುಣ. ಇಂತಹ ಗುಣವೇ ಇವರನ್ನು ನವದೆಹಲಿಯ ಖ್ಯಾತ ಸಂಶೋಧಕ ಶ್ರೀ ಎನ್. ಕೆ. ಶಮರ್ಾಜಿಯವರ ಸಂಪರ್ಕ ಪಡೆಯುವಂತೆ ಮಾಡಿದ್ದು. “ದಲಿತ್ ವಾಯ್ಸ್ ‘ ಆಂಗ್ಲ ಮಾಸಿಕದಲ್ಲಿ ಇವರ ಒಂದು ಪತ್ರ ಪ್ರಕಟವಾದದ್ದು, ಆ ಪತ್ರದ ಜಾಡು ಹಿಡಿದು ಶ್ರೀ ಎನ್. ಕೆ. ಶಮರ್ಾರವರು ಸಿದ್ಧಾರ್ಥ ಹೊಲೆಯಾರರನ್ನು ತಮ್ಮ ತೆಕ್ಕೆಗೆ ಸೆಳೆದು ಕೊಂಡದ್ದು, ಸಿದ್ದಾರ್ಥ ಹೊ;ಲೆಯಾರರ ವೈಚಾರಿಕತೆಗೆ ನೀರೆರೆದದ್ದು, ಬಹುಶಃ ವ್ಯಕ್ತಿಯೊಬ್ಬರ ಜೀವನಕ್ಕೆ ಸಿಗಬಹುದಾದ ನೈಜ ತಿರುವು ಎನ್ನಬಹುದು. ಸ್ವತಃ ಸಿದ್ಧಾರ್ಥ ಹೊಲೆಯಾರರೆ ” ನಾನೊಬ್ಬ ಲೇಖಕನಾಗಲು ನನಗೆ ಅಂಬೇಡ್ಕರ್ ವಾದದ ದೀಕ್ಷೆ ನೀಡಿದ ನನ್ನ ಪರಮ ಪೂಜ್ಯ ಗುರುಗಳಾದ ನವದೆಹಲಿಯ ಶ್ರೀ ಎನ್ ಕೆ ಶಮರ್ಾರವರೆ ಕಾರಣ ಎನ್ನುತ್ತಾರೆ.  ಪ್ರಸ್ತುತ ಇಂದು ಬಿಡುಗಡೆಯಾಗುತ್ತಿರುವ ಕೃತಿ ಅಂತಹ ಅಂಬೇಡ್ಕರ್ವಾದದ ದೀಕ್ಷೆಯಿಂದ ಒಡಮೂಡಿದ ಕೃತಿ ಎಂದರೆ ಅತಿಶಯೋಕ್ತಿಯೇನಲ್ಲ.
ಹಾಗಿದ್ದರೆ ಈ ಕೃತಿಯಲ್ಲಿ ಅಂತಹದ್ದೇನಿದೆ? ಲೇಖಕರು ಪ್ರಾರಂಭದಲ್ಲೇ ಹೇಳುವ ಹಾಗೆ” ವಿಜ್ಞಾನ ಮತ್ತು ತಂತ್ರ ಜ್ಞಾನವನ್ನು ಅಜ್ಞಾನದ ಪ್ರಚಾರಕ್ಕೆ ದುರ್ಬಳಕೆ ಮಾಡುತ್ತಿರುವುದರಿಂದ ವೀಕ್ಷಕರ ಮೇಲಾಗುತ್ತಿರುವ ದುಷ್ಪರಿಣಾಮದ ಹಿನ್ನೆಲೆಯಲ್ಲಿ ಕಲಿಯುಗದ ಬಗ್ಗೆ ಜನರಲ್ಲಿರುವ ಮೌಢ್ಯ ದ ಬಗ್ಗೆ ಕೆಲವರಲ್ಲಾದರೂ ಜಾಗೃತಿಮೂಡಿಸುವ ಉದ್ದೇಶದಿಂದ ….” ಹೌದು , ಇಲ್ಲಿ ಮೌಢ್ಯದ ವಿರುದ್ಧ ಚಾಟಿಯನ್ನೆ ಬೀಸಲಾಗಿದೆ. ಅದಕ್ಕಿಂತಲೂ ಮುಖ್ಯವಾಗಿ ಲೇಖಕರು ಭಾರತದ ಇತಿಹಾಸವನ್ನು ಪುನರ್ರಚಿಸುವ ಅಗತ್ಯವನ್ನು ಒತ್ತಿ ಹೇಳುತ್ತಾರೆ. “ಬೇಟೆಗಾರರಿಂದ ರಚಿತವಾದ  ಇತಿಹಾಸ” ಆ ಬೇಟೆಗಾರರಿಂದ ತಪ್ಪಿಸಿಕೊಂಡ ಹುಲಿಯ ಇತಿಹಾಸ ಆಗಿರಲು ಹೇಗೆ ಸಾಧ್ಯ? ಎಂದು ಈ ದೇಶದ ಮೂಲನಿವಾಸಿಗಳ ಹಿನ್ನೆಲಿಯಲ್ಲಿ ಭಾರತದ “ಮನು ಪ್ರಣೀತ ” ಇತಿಹಾಸವನ್ನು ಪ್ರಶ್ನಿಸುತ್ತಾರೆ.  ಹಾಗೆ ಪ್ರಶ್ನಿಸುವ ಅವರು  ಸುಮ್ಮನೇ ಕೂರುವುದಿಲ್ಲ. ಇತಿಹಾಸಕ್ಕೆ  ಹೊಸ ಬೆಳಕು ಚೆಲ್ಲು ವ ಪ್ರಯತ್ನವನ್ನೂ ಕೂಡ ಮಾಡುತ್ತಾರೆ. ಉದಾಹರಣೆಗೆ “ನಾಗ ಬೌದ್ಧ ಹೊಲೆಯರ ಇತಿಹಾಸ” ಎಂಬ ಲೇಖನದಲ್ಲಿ,  ” ಹೊಲ” ಎಂದರೆ “ಭೂಮಿ,” “ಹೊಲೆಯ” ಎಂದರೆ “ಹೊಲದ ಒಡೆಯ” ಎಂದು ಹೊಲೆಯ  ಎಂಬ ಪದಕ್ಕೆ ಹೊಸ ಅರ್ಥವನ್ನೇ ನೀಡುತ್ತಾರೆ. ಮತ್ತು ಇದಕ್ಕೆ ಸೂಕ್ತ ಆಧಾರವನ್ನು ಸಹ ನೀಡುತ್ತಾರೆ, ಮತ್ತೊಂದೆಡೆ ಅಂಬೇಡ್ಕರ್ರವರು “ಅಸ್ಪೃಶ್ಯರು ಮೂಲತಃ ನಾಗ ಜನಾಂಗದವರು” ಎಂದಿರುವುದಕ್ಕೆ ಸಮರ್ಥನೆಯಾಗಿ ಲೇಖಕರು, “ನಾಗರೀಕ”, “ನಾಗರೀಕತೆ”, “ನಗರ” ಈ ಪದಗಳು “ನಾಗ ಜನಾಂಗ ದ  ವ್ಯಕಿ”್ತಯನ್ನು, “ನಾಗ ಜನಾಂಗದ ಸಂಸ್ಕೃತಿ”ಯನ್ನು, ಮತ್ತು “ಅವರು ವಾಸಿಸುತ್ತಿದ್ದ ಸ್ಥಳ”ಗಳನ್ನು ಸೂಚಿಸುತ್ತಿದ್ದವು ಎನ್ನುತ್ತಾರೆ.
ಒಟ್ಟಾರೆ ಹೊಲೆಯಾರರು ತಮ್ಮ ಈ ಕೃತಿಯಲ್ಲಿ ಇತಿಹಾಸವೆಂಬ ಗೀಜಗನ ಗೂಡಿಗೆ ಕೈ ಹಾಕುವ ಪ್ರಯತ್ನ ಮಾಡಿದ್ದಾರೆ. ಉದಹರಣೆಗೆ “ಬೌದ್ಧ ಬಿಕ್ಕು ಯೇಸು ಕ್ರಿಸ್ತ” ಎಂಬ ಲೇಖನ ಅಂತಹ ಪ್ರಯತ್ನಗಳಲ್ಲೊಂದು. ಅದಲ್ಲದೇ “ಪೇಜಾವರ ಶ್ರೀಗಳಿಗೊಂದು ಬಹಿರಂಗ ಪತ್ರ” ಎಂಬ ಲೇಖನದಲ್ಲಿ, “ಬುದ್ಧ, ಬೌದ್ಧ ಬಿಕ್ಕು ಮತ್ತು ಬಿಕ್ಕುಣಿಯರನ್ನು ಧರ್ಮಸ್ಥಳ ಮಂಜುನಾಥ, ತಿರುಪತಿಯ ಬಾಲಾಜಿ, ಕೇದಾರನಾಥ, ಶ್ರೀ ರಂಗನಾಥ,ಪುರಿಯ ಜಗನ್ನಥ, ಕಾಶಿ ವಿಶ್ವನಾಥ, ಕಂಚಿ ಕಾಮಕ್ಷಿ, ಮಧುರೈ ಮೀನಾಕ್ಷಿ, ಎಲ್ಲಮ್ಮ, ಪೊಲ್ಲಮ್ಮ, ಮಾರಮ್ಮ  ಇತ್ಯಾದಿ ರೂಪಗಳಲ್ಲಿ ಪೂಜಿಸಲಾಗುತ್ತಿದೆ” ಎಂದು ಇತಿಹಾಸದ  ಬುಡವನ್ನೆ ಅಲುಗಾಡಿಸುವ ಪ್ರಯತ್ನ ಮಾಡಿದ್ದಾರೆ.
ಇದಿಷ್ಟೆ ಅಲ್ಲದೆ ಅಸ್ಪೃಶ್ಯರ ಮಧ್ಯೆ ಇರುವ “ಎಡಗೈ-ಬಲಗೈ” ಸಮಸ್ಯೆಯ ಬಗ್ಗೆ ಮಾನವೀಯ ಕಳಕಳಿಯ       ಹಿನ್ನೆಲೆಯಲ್ಲಿ ಬರೆಯುವ ಲೇಖಕರು , ಸಮಾಜದ ಅತ್ಯಂತ ತಳಸಮುದಾಯವಾದ ಜಲಗಾರರ ಸಮಸ್ಯೆಗಳನ್ನು ಎತ್ತಿಕೊಳ್ಳುತ್ತಾ ” ಚಂದ್ರ ಲೋಕವೆಂಬ ನಿಜರ್ೀವ ಲೋಕದ ಬಗ್ಗೆ ತರಲೆಕೆಡಿಸಿಕೊಳ್ಳುವ ವಿಜ್ಞಾನಿಗಳು ಮ್ಯಾನ್ ಹೋಲ್ಗಳನ್ನು ಶುಚಿಗೊಳಿಸಲು ಇನ್ನೂ ಏಕೆ ಒಂದೂ ಯಂತ್ರವನ್ನು ಕಂಡುಹಿಡಿದಿಲ್ಲ? ಎಂದು ಆತಂಕದಿಂದ ಪ್ರಶ್ನಿಸುತ್ತಾರೆ.  ಆ ನಿಟ್ಟಿನಲಿ ಮಾಹಿತಿತಂತ್ರಜ್ಞಾನ (ಐ. ಟಿ), ಜೈವಿಕ ತಂತ್ರಜ್ಞಾನ(ಬಿ,ಟಿ) ಯ ಹಾಗೆ ಶೌಚ ತಂತ್ರಜ್ಞಾನ (ಣಛಿಚಿತಜಟಿರರ ಖಿಜಛಿಟಿಠಟಠರಥಿ)  ಕೂಡ ಅಭಿವೃದ್ಧಿಯಾಗಬೇಕು ಎಂಬ ಗಂಭೀರ ಸಲಹೆಯನ್ನು ನೀಡುತ್ತಾರೆ.
ಒಟ್ಟಾರೆ ನಾಗಸಿದ್ಧಾರ್ಥ ಹೊಲೆಯಾರರ ಈ ಕೃತಿ ಮಾನವ ಪರ ಕಾಳಜಿಯ ಕೃತಿಯಾಗಿದೆ. ಅದಕ್ಕೆ ಹೊಸ ದಿಕ್ಕು ಸೂಚಿಸುವ ಛಾತಿ ಇದೆ.  ಎಲ್ಲವನ್ನು ನೇರವಾಗಿ ಹೇಳುವ ದಿಟ್ಟ ಗುಣ ಇದೆ. ಈ ಸಂಧರ್ಭದಲ್ಲಿ  ಖ್ಯಾತ ಚಿಂತಕ ಜೆ. ಆರ್. ಲಾವೆಲ್ರ ಹೇಳಿಕೆ ಇಲ್ಲಿ ಉಲ್ಲೇಖನೀಯ, “ನಾವು ಮಾತನಾಡುತ್ತೇವೆ ನಮ್ಮನ್ನು ಎಲ್ಲರೂ ಕೇಲಿಸಿಕೊಳ್ಳಲಿ. ಇದರಿಂದ  ಪ್ರಪಂಚದ ವ್ಯವಸ್ಥೆ ಬಿರುಕು ಬಿಟ್ಟರೂ ಬಿಡಲಿ, ನಾವು ಒಂದು ಶಬ್ಧವನ್ನೂ ಬಚ್ಚಿಡುವುದಿಲ್ಲ. ಆಡಿದ ಒಂದು ಅಕ್ಷರವನ್ನೂ ಹಿಂದಕ್ಕೆ ತೆಗೆದು ಕೊಳ್ಳುವುದಿಲ್ಲ. ಅಂಜುಬುರುಕರು ಅಂಜುತ್ತಿರಲಿ , ಹೇಡಿಗಳು ಹಿಂಜರಿಯಲಿ, ಸಂಪ್ರದಾಯವಾದಿಗಳು ಎದುರಾಗಿ ನಿಲ್ಲಲಿ, ನಾವು ಯಾವುದನ್ನು ಧೈರ್ಯದಿಂದ ವಿಚಾರಿಸಿದ್ದೇವೆಯೋ ಅದನ್ನು ಹೇಳುವ ಧೈರ್ಯವು ನಮಗಿದೆ.”                                                                                                        ನಾಗಸಿದ್ಧಾರ್ಥ ಹೊಲೆಯಾರರು ಎಲ್ಲವನ್ನು ಧೈರ್ಯದಿಂದ ಹೇಳಿದ್ದಾರೆ. ಅವರು ಯಾವುದನ್ನೂ ಬಚ್ಚಿಟ್ಟಿಲ್ಲ. ಹಿಂಜರಿಯಲು ಹೋಗಿಲ್ಲ      , ಅಂಜಿಕೆಯಂತೂ ಇಲ್ಲವೇ ಇಲ್ಲ. ಆದರೆ ಎಲ್ಲರೂ ಕೇಳಿಸಿ ಕೊಳ್ಳಲಿ ಎಂಬ ಕಳಕಳಿ ಇದೆ. ತನ್ನ ವಿಚಾರಗಳನ್ನು  ಎಲ್ಲರಿಗೂ ಮುಟ್ಟಿಸಬೇಕೆಂಬ ಅಧಮ್ಯ ಉತ್ಸಾಹವಿದೆ. ಮತ್ತು ಹಾಗಯೇ ಸಮಯ ಕೂಡ ಇದೆ ಯಾಕೆಂದರೆ ಸಿದ್ಧಾರ್ಥ ಹೊಲೆಯಾರರಿಗೆ ಈಗಿನ್ನೂ ನಲವತ್ತು.
ಒಟ್ಟಿನಲಿ ನಾಗಸಿದ್ಧಾರ್ಥ ಹೊಲೆಯಾರರ ” ಬಾಬಾಸಾಹೇಬ್ ಡಾ.ಅಂಬೇಡ್ಕರ್ ದೃಷ್ಟಿಯಲ್ಲಿ ಕಲಿಯುಗ” ಎಂಬ ಈ ಕೃತಿ ವೈಚಾರಿಕ ಸಾಹಿತ್ಯಕ್ಕ್ಕೆ ಹರಿದು ಬರುತ್ತಿರುವ ಸಣ್ಣ ತೊರೆ. ಓದುಗರು ಅದರ ಒಂದೊಂದು ಗುಟುಕನ್ನೂ ಮಾನವೀಯ ಕಳಕಳಿಯ ಹಿನ್ನೆಲೆಯಲ್ಲಿ ಸ್ವೀಕರಿಸಬೇಕಾಗಿದೆ. ಕಡೆಯದಾಗಿ ಕನ್ನಡ ಮರಾಠಿಯ ಮೊದಲ ದಲಿತ ಲೇಖಕ ಎಂದು ಗುರುತಿಸಲ್ಪಡುವ ದೇವರಾಯ ಹಿಂಗಳೆಯವರು ಅಂಬೇಡ್ಕರರನ್ನು ಕುರಿತು ಒಂದು ಕವನ ಬರೆದಿದ್ದಾರೆ. ಅದರ ಒಂದೆರಡು ಸಾಲುಗಳು  ಇಂತಿವೆ.
ಅವನು ಸೂರ್ಯ
ನಾವು ಅವನ ತುಣುಕುಗಳು
ಲೇಖಕ ನಾಗಸಿದ್ಧಾರ್ಥ ಹೊಲೆಯಾತರರು ಅಂತಹ ತುಣುಕಿನ ಒಂದಂಶವಾಗಿ ಬೆಳಗಲಿ, ಕನ್ನಡ ಸಾಹಿತ್ಯದ ಆಸ್ತಿಯಾಗಲಿ ಎಂಬುದಷ್ಟೆ ಈ ಲೇಖನದ ಕಳಕಳಿ.
-ರಘೋತ್ತಮ ಹೊ.ಬ

ಚಾಮರಾಜನಗರ-571313
ಮೊಬೈಲ್-9481189116

ಮುಚ್ಚಿಡಲ್ಪಟ್ಟ ಅಂಬೇಡ್ಕರ್ ಭವ್ಯ ಇತಿಹಾಸ


ಮುಚ್ಚಿಡಲ್ಪಟ್ಟ ಅಂಬೇಡ್ಕರ್ ಭವ್ಯ ಇತಿಹಾಸ

ರವಿವಾರ – ಜೂನ್ -27-2010

varthabharathi

ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರ ಬಗ್ಗೆ ಈ ದೇಶದ ಜನತೆಗೆ ಏನು ಗೊತ್ತು? ಗೊತ್ತಿರುವುದಿಷ್ಟೆ. ಅಂಬೇಡ್ಕರರು ಯಾರೂ ಮುಟ್ಟಿಸಿಕೊಳ್ಳಲಾಗದ ಒಂದು ಕೀಳು ಜಾತಿಯಲ್ಲಿ ಹುಟ್ಟಿದರು. ಬಾಲ್ಯ ದಿಂದಲೇ ಅಸ್ಪಶತೆಯ ನೋವನ್ನು ಅನುಭವಿಸಿ ದರು. ತಮ್ಮ ತಂದೆಯನ್ನು ನೋಡಲು ಗಾಡಿಯಲ್ಲಿ ಹೋಗುತ್ತಿದ್ದಾಗ ಗಾಡಿಯಿಂದ ತಳ್ಳಲ್ಪಟ್ಟರು.

ಹೀಗೆ ಅವಮಾನಕ್ಕೊಳಗಾದ ಅಂಬೇಡ್ಕರ್ ಮುಂದೆ ಉನ್ನತ ಜ್ಞಾನಪಡೆದು ಈ ದೇಶದ ‘ಸಂವಿಧಾನ ಶಿಲ್ಪಿ’ ಎನಿಸಿ ಕೊಂಡರು. ಅಸ್ಪಶರ ಉದ್ಧಾರಕ್ಕಾಗಿ ಹೋರಾಡಿದರು ಎಂಬುದಷ್ಟೆ. ಬಹುಶಃ ಇದ ಕ್ಕಿಂತ ಹೆಚ್ಚಿಗೆ ಅಂಬೇಡ್ಕರರ ಬಗ್ಗೆ ಈ ದೇಶದ ಜನತೆಗೆ ಗೊತ್ತಿರುವುದು ಸಾಧ್ಯವಿಲ್ಲ. ಅಥವಾ ಮೇಲೆ ಹೇಳಿರುವುದೇ ಹೆಚ್ಚಿರಬೇಕು! ದಲಿತರಿಗೆ ಮೀಸಲಾತಿ ತಂದುಕೊಟ್ಟದಷ್ಟೇ ಅವರ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ತನ್ಮೂಲಕ ಅಂಬೇಡ್ಕರ್ ಎಂಬ ‘ಮಹಾನ್ ಇತಿಹಾಸವನ್ನು’ ಮುಚ್ಚಲಾಗುತ್ತಿದೆ!

ಹಾಗಿದ್ದರೆ ಅಂಬೇಡ್ಕರ್‌ರ ಸಾಧನೆ ಇದಿಷ್ಟು ಮಾತ್ರವಾ? ಅಥವಾ ಇನ್ನೇನು ಇಲ್ಲವಾ? ಯಾಕೆಂದರೆ 2006ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಅಮೇರಿಕದ ಅಧ್ಯಕ್ಷ ಜಾರ್ಜ್‌ಬುಷ್ ‘ಗಾಂಧಿ, ಠಾಗೋರ್ ಮತ್ತು ನೆಹರೂ’ರವರನ್ನು ನವ ಭಾರತದ ನಿರ್ಮಾತೃಗಳೆನ್ನುತ್ತಾರೆ. ಅಂಬೇಡ್ಕರ್ ರನ್ನು ಈ ಪರಿಯಲ್ಲಿ ಇತಿಹಾಸದಲ್ಲಿ ಕಬ್ಜರನ್ನಾಗಿ ಸುವ ಅಥವಾ ಮರೆಮಾಚುವ ಪ್ರಯತ್ನ ನಿರಂತರ ವಾಗಿ ನಡೆಯುತ್ತಿರುವಾಗ ಬುಷ್‌ರಂತಹವರು ಇದಕ್ಕಿಂತ ಹೆಚ್ಚಿಗೆ ಇನ್ನೇನನ್ನು ತಾನೆ ಹೇಳಿ ಯಾರು? ಈ ಹಿನ್ನೆಲೆಯಲ್ಲಿ ಹೊರಜಗತ್ತಿಗೆ ಅಂಬೇಡ್ಕರ್‌ರ ನೈಜ ಸಾಧನೆಗಳನ್ನು ಬಿಚ್ಚಿ ಹೇಳಬೇಕಾಗಿದೆ. ಇತಿಹಾಸದಲ್ಲಿ ಅವರನ್ನು ಮರೆಮಾಚಲು ನಡೆಯುತ್ತಿರುವ ದುಷ್ಟ ಪ್ರಯತ್ನವನ್ನು ತಡೆಯಬೇಕಾಗಿದೆ.

ಹಾಗಿದ್ದರೆ ಅಸ್ಪಶರ ಉದ್ಧಾರವನ್ನು ಸಂವಿ ಧಾನ ರಚನೆಯನ್ನು ಹೊರತುಪಡಿಸಿ ಅಂಬ್ಕೇಡರ್‌ರ ಇನ್ನೇನೇನು ಸಾಧನೆಗಳಿವೆ? ಪಟ್ಟಿ ಮಾಡುತ್ತಾ ಹೋದರೆ ‘ಬಾಬಾ ಸಾಹೇಬ’ರ ವ್ಯಕ್ತಿತ್ವ ಗಾಂಧಿ ಎಂಬ ‘ಮಹಾತ್ಮ’ರನ್ನೂ, ಠಾಗೋರ್ ಎಂಬ ‘ಗುರುದೇವ’ರನ್ನೂ, ನೆಹರೂ ಎಂಬ ‘ಚಾಚಾ’ ರನ್ನೂ ಮೀರಿ ಬೆಳೆಯುತ್ತದೆ. ಏಕೆಂದರೆ ಈ ದೇಶದಲ್ಲಿ ಪ್ರಪ್ರಥಮವಾಗಿ ರೈತರ ಪರ ದನಿ ಎತ್ತಿದ್ದು ಅಂಬೇಡ್ಕರ್.

ಈ ದೇಶದ ಮಹಿಳೆಯ ರಿಗೆ ‘ಹಿಂದೂ ಸಂಹಿತೆ ಮಸೂದೆಯ ಮೂಲಕ ನ್ಯಾಯ ದೊರಕಿಸಿಕೊಡಲು ಹೋರಾಡಿದ್ದು ಅಂಬೇಡ್ಕರ್. ಅಚ್ಚರಿಯ ವಿಷಯವೆಂದರೆ ಈ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್.ಬಿ.ಐ) ಸ್ಥಾಪಿಸಲು ಕಾರಣರಾ ದದ್ದು ಕೂಡ ಅಂಬೇಡ್ಕರ್‌ರೆ.

ಹಿಂದೂ ಸಾಮಾಜಿಕ ಸುಧಾರಣೆಗೆ ಯತ್ನಿಸಿದ್ದು, ಪಾಕಿಸ್ತಾನ ವಿಷಯ, ಕಾರ್ಮಿಕ ನೀತಿ, ವಿದ್ಯುತ್ ಮತ್ತು ನೀರಾವರಿ ನೀತಿ, ದಾಮೋದರ ಕಣಿವೆ ಯೋಜನೆ, ಹಿರಾಕುಡ್ ಯೋಜನೆ, ಸೋನ್ ಕಣಿವೆ ಯೋಜನೆ, ಎರಡನೆ ಮಹಾಯುದ್ಧದ ನಂತರ ದೇಶದ ಆರ್ಥಿಕ ನೀತಿ ರೂಪಿಸಿದ್ದು. ಅಬ್ಬಬ್ಬಾ ಪಟ್ಟಿ ಮಾಡುತ್ತಾ ಹೋದರೆ ಅಂಬೇಡ್ಕರ್‌ರು ಇದಕ್ಕೆಲ್ಲ ಕಾರಣರಾ ಎಂದೆನಿಸುತ್ತದೆ. ವಾಸ್ತವವೆಂದರೆ ಇವು ಅವರ ಮುಚ್ಚಿಟ್ಟ ಇತಿಹಾಸದ ಕೆಲವು ತುಣುಕುಗಳು ಅಷ್ಟೇ!

ಉದಾಹರಣೆಗೆ ಹೇಳುವುದಾದರೆ 1945ರಲ್ಲಿ ಎರಡನೆ ಮಹಾಯುದ್ಧದ ನಂತರ ಈ ದೇಶದ ಕೃಷಿ, ಕೈಗಾರಿಕೆ, ಆರ್ಥಿಕ ಸ್ಥಿತಿ, ಪುನರ್ವಸತಿ ಮತ್ತು ಸೈನಿಕರ ಕಲ್ಯಾಣಕ್ಕಾಗಿ ‘ಪುನರುಜ್ಜೀವನ ಸಮಿತಿ ಸಭೆ’ ಬ್ರಿಟಿಷ್ ಗವರ್ನರ್ ಜನರಲ್‌ರಿಂದ ರಚಿಸಲ್ಪಟ್ಟಿತು. ಅಂಬೇ ಡ್ಕರ್ ಆ ಸಮಿತಿಯ ಸದಸ್ಯರಾಗಿದ್ದರು ಮತ್ತು ಅವರಿಗೆ ‘ನೀರಾವರಿ ಮತ್ತು ವಿದ್ಯುಚ್ಛಕ್ತಿ ನೀತಿ ನಿರೂ ಪಣಾ ಸಮಿತಿ’ಯ ಜವಾಬ್ದಾರಿಯನ್ನು ವಹಿಸಲಾಯಿತು.

ಆಸಕ್ತಿದಾಯಕ ವಿಷಯವೇನೆಂದರೆ ಆ ಸಮಿತಿಯ ಅಧ್ಯಕ್ಷರಾಗಿ ಅಂಬೇಡ್ಕರ್ ಅದ್ಭುತವಾದ ಸಾಧನೆ ಮಾಡಿದ್ದಾರೆ. 1942ರಿಂದ 1946ರ ವರೆಗೆ ಗವರ್ನರ್ ಜನರಲ್‌ರವರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕ್ಯಾಬಿನೆಟ್ ಮಂತ್ರಿಯ ಸ್ಥಾನ ಪಡೆದಿದ್ದ ಅವರಿಗೆ ಕಾರ್ಮಿಕ, ನೀರಾವರಿ ಮತ್ತು ವಿದ್ಯುಚ್ಛಕ್ತಿ ಇಲಾಖೆಗಳನ್ನು ವಹಿಸಲಾಗಿತ್ತು. ಈ ನಾಲ್ಕು ವರ್ಷಗಳ ಅವಧಿಯಲ್ಲಿ ಅಂಬೇಡ್ಕರ್‌ರವರು ಮಾಡಿದ ಸಾಧನೆ ಬಹುತೇಕ ಜನರಿಗೆ ಗೊತ್ತಿಲ್ಲ!

ಅಥವಾ ಗೊತ್ತಾಗಲು ಬಿಟ್ಟಿಲ್ಲ. ಕುತೂಹಲಕಾರಿ ವಿಷಯವೆಂದರೆ ಈ ಅವಧಿಯಲ್ಲಿಯೇ ಅವರು ಪ್ರಸಿದ್ಧ ದಾಮೋದರ್ ಕಣಿವೆ ಯೋಜನೆ, ಹಿರಾ ಕುಡ್ ಯೋಜನೆ ಮತ್ತು ಸೋನ್ ಕಣಿವೆ ಯೋಜನೆ ಜಾರಿಗೊಳಿಸಿದ್ದು ಮತ್ತು ಇಂತಹ ಬೃಹತ್ ನೀರಾವರಿ ಯೋಜನೆ, ವಿದ್ಯುತ್ ಯೋಜನೆಗಳನ್ನು ಗಮನ ದಲ್ಲಿಟ್ಟುಕೊಂಡು ಅವರು 1944ರಲ್ಲೆ ‘ಕೇಂದ್ರೀಯ ಜಲವಿದ್ಯುತ್ ಮತ್ತು ನೀರಾವರಿ ಆಯೋಗ’ವನ್ನು ಸ್ಥಾಪಿಸಿದ್ದು.

ಇವತ್ತು ನಮ್ಮ ಮನೆಗಳೇನಾದರೂ ಬೆಳಗುತ್ತಿದ್ದರೆ, ನಮ್ಮ ಹೊಲಗಳೇನಾದರೂ ಹಸುರಿನಿಂದ ಕಂಗೊಳಿಸುತ್ತಿದ್ದರೆ ಅದು ನೀರಾವರಿ ಮತ್ತು ವಿದ್ಯುತ್ ಕ್ಷೇತ್ರದಲ್ಲಿ ಅಂಬೇಡ್ಕರ್ ಮಾಡಿದ ಅದ್ಭುತ ಸಾಧನೆಯ ಫಲವಲ್ಲದೆ ಬೇರೇನೂ ಅಲ್ಲ. ದುರಂತ ವೆಂದರೆ ಇಂತಹ ಅದ್ಭುತ ಸಾಧನೆಯನ್ನು ಮುಚ್ಚಿಡಲಾಗಿದೆಯಲ್ಲ ಎಂಬುದು.

ಅಂಬೇಡ್ಕರ್‌ರ ಮತ್ತೊಂದು ಸಾಧನೆಯನ್ನು ಹೇಳಲೇಬೇಕು. ಅದು ಭಾರತೀಯ ರಿಸರ್ವ್ (ಆರ್‌ಬಿಐ)ಗೆ ಸಂಬಂಧಿಸಿದ್ದು. ತಮ್ಮ ‘ಆರ್ಥಿಕ ಯೋಜನೆ, ನೀರಾವರಿ ಮತ್ತು ವಿದ್ಯುತ್ ಕ್ಷೇತ್ರದಲ್ಲಿ ಅಂಬೇಡ್ಕರ್ ಪಾತ್ರ’ ಎಂಬ ಕೃತಿಯಲ್ಲಿ ಖ್ಯಾತ ಚಿಂತಕ ಸುಖದೇವ್ ಥೊರಟ್‌ರವರು ಇದನ್ನು ದಾಖಲಿಸುತ್ತಾರೆ. ”ಆರ್‌ಬಿಐ ಸ್ಥಾಪನೆಗೆ ಬ್ರಿಟಿಷ್ ಮಹಾರಾಣಿಯವರಿಂದ ನೇಮಿಸಲ್ಪಟ್ಟಿದ್ದ ‘ಹಿಲ್ಟನ್ ಯಂಗ್ ಆಯೋಗ’ದ ಮುಂದೆ ಅಂಬೇಡ್ಕರ್ ರವರು ಆರ್‌ಬಿಐನ ಮಾರ್ಗದರ್ಶಿ ಸೂತ್ರ, ಕಾರ್ಯಶೈಲಿ ಮತ್ತು ದೂರದೃಷ್ಟಿಯನ್ನು ಮಂಡಿಸುತ್ತಾರೆ.

ತನ್ಮೂಲಕ ಆರ್.ಬಿ.ಐ.ನ ಸ್ಥಾಪನೆಗೆ ಕಾರಣರಾಗುತ್ತಾರೆ’ ಎನ್ನುತ್ತಾರೆ ಸುಖದೇವ್ ಥೊರಟ್. ಕುತೂಹಲಕಾರಿ ಅಂಶವೆಂದರೆ ‘ಹಿಲ್ಟನ್ ಯಂಗ್’ ಆಯೋಗದ ಪ್ರತಿಯೊಬ್ಬ ಸದಸ್ಯನ ಕೈಯಲ್ಲೂ ಅಂಬೇಡ್ಕರ್ ‘ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್’ಗಾಗಿ ‘ಡಿ.ಎಸ್‌ಸಿ’ ಪದವಿ ಪಡೆಯಲು ರಚಿಸಿದ್ದ ‘ರೂಪಾಯಿಯ ಸಮಸ್ಯೆ, ಅದರ ಮೂಲ ಮತ್ತು ಪರಿಹಾರ’ ಎಂಬ ಕೃತಿಯಿತ್ತು.

ದೇಶದ ಹಣಕಾಸು ವ್ಯವಸ್ಥೆ ಪಟ್ಟಭದ್ರರ ಕೈಗೆ ಜಾರುತ್ತಿದ್ದುದನ್ನು ಗಮನಿಸಿ ಅಂಬೇಡ್ಕರ್‌ರು ಆರ್.ಬಿ.ಐ.ನ ಅಗತ್ಯತೆ ಮತ್ತು ಅದರ ಭವಿಷ್ಯದ ಮಾರ್ಗಸೂಚಿಯ ಬಗ್ಗೆ ಆಯೋಗದ ಮುಂದೆ ಸಮಗ್ರವಾದ ವಾದ ಮಂಡಿಸುತ್ತಾರೆ. ತನ್ಮೂಲಕ 1934ರಲ್ಲಿ ಅದರ ಸ್ಥಾಪನೆಗೆ ಕಾರಣರಾಗುತ್ತಾರೆ. ಮತ್ತೆ ಕೇಳು ತ್ತಿರುವ ಪ್ರಶ್ನೆಯೇನೆಂದರೆ ಇಂತಹ ಅದ್ಭುತ ಇತಿಹಾಸ ಎಷ್ಟು ಜನರಿಗೆ ಗೊತ್ತು ಎಂಬುದು?

ಮತ್ತೊಂದು ವಿಷಯ ಇಲ್ಲಿ ಹೇಳಲೇಬೇಕಾಗಿದೆ. ಇತ್ತೀಚೆಗೆ ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ ತನ್ನ 150ನೆ ವರ್ಷಾಚರಣೆಯನ್ನು ನೆರವೇರಿಸಿಕೊಂಡಿತು. ಅದು ರಾಷ್ಟ್ರಗೀತೆಯ ಕರ್ತೃ ರವೀಂದ್ರನಾಥ್ ಠಾಗೋರ್‌ರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಎಂದು ಬಿಂಬಿಸಿತು. ಪ್ರಶ್ನೆಯೇನೆಂದರೆ ಈ ದೇಶದ ಕರೆನ್ಸಿಯ ಬಗ್ಗೆ ಹಣಕಾಸು, ಅರ್ಥಶಾಸ್ತ್ರದ ಬಗ್ಗೆ ಠಾಗೋರ್‌ರ ಕೊಡುಗೆಯಾದರೂ ಏನು? ಎಂಬುದು.

ಖಂಡಿತ ಏನೂ ಇಲ್ಲ. ಎಸ್.ಬಿ.ಐ. ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಕಾರಣಕರ್ತರಾದ, ಹಲವಾರು ಕೃತಿಗಳನ್ನು ರಚಿಸಿ ಈ ದೇಶದ ಆರ್ಥಿಕತೆ ಮತ್ತು ಹಣಕಾಸು ಕ್ಷೇತ್ರಕ್ಕೆ ಅದ್ಭುತ ಕೊಡುಗೆ ನೀಡಿರುವ, ನೊಬೆಲ್ ಪ್ರಶಸ್ತಿ ವಿಜೇತ ಖ್ಯಾತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್‌ರಿಂದ ‘ಅಂಬೇಡ್ಕರ್ ನನ್ನ ಅರ್ಥಶಾಸ್ತ್ರದ ಗುರು’ ಎಂದು ಕರೆಸಿಕೊಂಡಿರುವ ಬಾಬಾಸಾಹೇಬ್ ಡಾ. ಅಂಬೇಡ್ಕರ್‌ರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಎಂದು ಬಿಂಬಿಸಬೇಕಿತ್ತು!

ದುರಂತ ವೆಂದರೆ ಅಸ್ಪಶತೆಯ ಸೋಂಕು ತಗುಲಿಸಿಕೊಂಡ ಈ ದೇಶದ ಸ್ಥಾಪಿತ ಹಿಸಾಕ್ತಿಗಳಿಗೆ ಅಂಬೇಡ್ಕರ್‌ರ ಈ ಸಾಧನೆಗಳು ಕಾಣುತ್ತಿಲ್ಲ. ಇನ್ನು ಅವರು ಬ್ರಾಂಡ್ ಅಂಬಾಸಿಡರ್ ಆಗಲು ಹೇಗೆ ಸಾಧ್ಯ? ಅವರನ್ನು ಕೇವಲ ಒಂದು ಸಮುದಾಯದ ‘ಬ್ರಾಂಡ್’ ಆಗಿ ಬಿಂಬಿಸಲಾಗುತ್ತಿದೆ ಅಷ್ಟೆ!

ಇನ್ನು ಈ ನಡುವೆ ಅಂತರಾಜ್ಯ ಸಮಸ್ಯೆ ಗಳ ಬಗ್ಗೆ ಅಂಬೇಡ್ಕರ್‌ರ ಅನಿಸಿಕೆಗಳನ್ನು ದಾಖಲಿಸಲೇಬೇಕು. ಯಾಕೆಂದರೆ 1955ರಲ್ಲೇ ಅಂಬೇಡ್ಕರ್ ತಮ್ಮ ‘ಭಾಷಾವಾರು ಪ್ರಾಂತ್ಯ ಗಳ ಬಗೆಗಿನ ಆಲೋಚನೆಗಳು’ ಎಂಬ ಕೃತಿಯಲ್ಲಿ ಮಧ್ಯಪ್ರದೇಶವನ್ನು ಉತ್ತರ ಮತ್ತು ದಕ್ಷಿಣ ರಾಜ್ಯಗಳಾಗಿ ವಿಂಗಡಿಸಲು ಮತ್ತು ಬಿಹಾರವನ್ನು ಎರಡು ರಾಜ್ಯವಾಗಿ ವಿಂಗಡಿಸಲು ಸಲಹೆ ನೀಡು ತ್ತಾರೆ.

ಅಚ್ಚರಿಯ ವಿಷಯವೇನೆಂದರೆ ಅವರು ಸಲಹೆ ನೀಡಿದ 45 ವರ್ಷಗಳ ನಂತರ ಅದು ಜಾರಿಯಾ ದದ್ದು. ಯಾಕೆಂದರೆ 2000ದಲ್ಲಿ ಮಧ್ಯಪ್ರದೇಶದಿಂದ ಛತ್ತೀಸ್‌ಗಢ ಮತ್ತು ಬಿಹಾರದಿಂದ ಜಾರ್ಖಂಡ್ ಅನ್ನು ವಿಭಜನೆಗೊಳಿಸಿ ಪ್ರತ್ಯೇಕ ರಾಜ್ಯಗಳೆಂದು ಘೋಷಿಸಲಾಯಿತು. ತನ್ಮೂಲಕ ಅಂಬೇಡ್ಕರ್‌ರ ದೂರದೃಷ್ಟಿಗೆ ಮನ್ನಣೆ ನೀಡಲಾಯಿತು. (ಅಂದಹಾಗೆ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಇರುವ ಹೊಗೇನಕಲ್ ವಿವಾದಕ್ಕೆ ಅಂಬೇಡ್ಕರ್‌ರಲ್ಲಿ ಪರಿಹಾರವಿದೆಯೆಂದರೆ ಅತಿಶಯೋಕ್ತಿಯೆನಿಸದು. ಅದಕ್ಕಾಗಿ ಅಂಬೇಡ್ಕರ್ ಕೃತಿಗಳ ಮೊರೆ ಹೋಗಬೇಕಷ್ಟೆ.)

ಅಂಬೇಡ್ಕರ್‌ರನ್ನು ಮುಚ್ಚಿಡುವ, ಅವರ ಸಾಧನೆಗಳೆಲ್ಲವನ್ನು ಇಡೀ ಜಗತ್ತಿಗೆ ಹೇಳದಿರುವುದರ ಹಿಂದಿರುವ ಹುನ್ನಾರವಾದರೂ ಏನು? ಖಂಡಿತ ಒಂದು ಬೃಹತ್ ಸಮುದಾಯವನ್ನು, ಅದರ ಭವ್ಯ ಇತಿಹಾಸವನ್ನು ಅದರಿಂದ ಮರೆಮಾಚಿ ಮಾನಸಿಕ ಗುಲಾಮಗಿರಿಗೆ ತಳ್ಳುವ ವ್ಯವಸ್ಥಿತ ಸಂಚಿದು. ಈ ನಿಟ್ಟಿನಲ್ಲಿ ಶೋಷಿತ ಸಮುದಾಯ ಅಂತಹ ವ್ಯವಸ್ಥಿತ ಸಂಚಿಗೆ ಬಲಿಯಾಗಬಾರದು.

‘ನಮಗೇಕೆ ಇದನ್ನು ಹೇಳಲಿಲ್ಲ’ ಎಂದು ಮುಂದಿನ ಪೀಳಿಗೆ ಕೇಳುವಂತಾಗಬಾರದು. ಆದಕಾರಣ ಶೋಷಿತ ಸಮುದಾಯ ತಕ್ಷಣ ಎಚ್ಚೆತ್ತುಕೊಳ್ಳಬೇಕಿದೆ. ಅಂಬೇಡ್ಕರ್‌ರ ಭವ್ಯ ಇತಿಹಾಸವನ್ನು, ಪ್ರತಿಯೊಂದು ಸಾಧನೆಯನ್ನು ಇಡೀ ಜಗತ್ತಿಗೆ ಸಾರಿ ಹೇಳಲು ಟೊಂಕಕಟ್ಟಿ ನಿಲ್ಲಬೇಕಿದೆ.

-ರಘೋತ್ತಮ ಹೂ.ಬ. ಚಾಮರಾಜನಗರ, Ph: 09481189116

ಕಾಂಗ್ರೆಸ್, ಬಿಜೆಪಿ ಅಂಬೇಡ್ಕರ್ ವಿರೋಧಿಗಳು: ಮಾಯಾವತಿ


ಕಾಂಗ್ರೆಸ್, ಬಿಜೆಪಿ ಅಂಬೇಡ್ಕರ್ ವಿರೋಧಿಗಳು: ಮಾಯಾವತಿ  
ಲಕ್ನೋ, ಶನಿವಾರ, 27 ಮಾರ್ಚ್ 2010( 20:32 IST )

<!–

–>ಕಾಂಗ್ರೆಸ್, ಭಾರತೀಯ ಜನತಾ ಪಕ್ಷ ಹಾಗೂ ಸಮಾಜವಾದಿ ಪಕ್ಷಗಳು ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ವಿರೋಧಿಗಳಾಗಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಶನಿವಾರ ಗಂಭೀರವಾಗಿ ಆರೋಪಿಸಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಜಾರಿ ನಿರ್ಧಾರ ಕುರಿತಂತೆ ಮತ್ತೆ ವಾಗ್ದಾಳಿ ನಡೆಸಿರುವ ಅವರು, ಮಹಿಳಾ ಮೀಸಲಾತಿ ಮಸೂದೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹಾಗೂ ಮೇಲ್ವರ್ಗದ ಬಡ ಮಹಿಳೆಯರಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದು ಆರೋಪಿಸಿದ್ದಾರೆ.

ಬಿಎಸ್ಪಿ ಪಕ್ಷದ ಸಭೆಯಲ್ಲಿ ಮಾತನಾಡಿದ ಮಾಯಾವತಿ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನೀತಿ ಮತ್ತು ನಡವಳಿಕೆಗಳನ್ನು ಗಮನಿಸಿದರೆ ಇವರೆಲ್ಲಾ ಯಾವಾಗಲೂ ಅಂಬೇಡ್ಕರ್ ವಿರೋಧಿಗಳಂತೆ ವರ್ತಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ ಎಂದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಗೌರವಾರ್ಥವಾಗಿ ಬೃಹತ್ ಸೌಧ, ಪಾರ್ಕ್, ಯೂನಿರ್ವಸಿಟಿಗಳನ್ನು ನಿರ್ಮಿಸಲು ಮುಂದಾದ ಸಂದರ್ಭದಲ್ಲಿಯೇ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಇನ್ನುಳಿದ ವಿರೋಧ ಪಕ್ಷಗಳು ಅನಾವಶ್ಯಕ ವಿವಾದ ಹುಟ್ಟುಹಾಕಲು ಪ್ರಾರಂಭಿಸಿರುವುದಾಗಿ ಹೇಳಿದರು.

ಜಾತಿ ಆಧಾರಿತ ಜನಗಣತಿ ಮತ್ತು ಅಂಬೇಡ್ಕರ್ Caste-based Census & Ambedkar:Ho.ba.Raghothama


ಜಾತಿ ಆಧಾರಿತ ಜನಗಣತಿ ಮತ್ತು ಅಂಬೇಡ್ಕರ್

ಜನಗಣತಿ ಹಾಗೆಂದರೆ ಸರಳವಾಗಿ ಜನರನ್ನು ಎಣಿಸುವುದು ಎಂದರ್ಥ. ಹಾಗಂತ ಕುರಿಗಳನ್ನು ಲೆಕ್ಕ ಹಾಕುವ ಹಾಗೆ ಜನರನ್ನು ಲೆಕ್ಕ ಹಾಕಲಾಗು ತ್ತದೆಯೇ? ಖಂಡಿತ ಇಲ್ಲ. ಜನಗಣತಿ ಒಂದು ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಕನ್ನಡಿ ಹಿಡಿಯುತ್ತದೆ. ಹಿಡಿಯುತ್ತದೆ ಎನ್ನುವು ದಕ್ಕಿಂತ ಕನ್ನಡಿ ಹಿಡಿಯಲೇಬೇಕು ಎನ್ನುವುದು ಹೆಚ್ಚು ಸೂಕ್ತ. ಅದರಲ್ಲೂ ಸಂಕೀರ್ಣ ಸಾಮಾಜಿಕ ವ್ಯವಸ್ಥೆ ಹೊಂದಿರುವ ಭಾರತದಂತಹ ಈ ದೇಶದ ವಾಸ್ತವ ಸಂಗತಿ ಗಳನ್ನು ಜನಗಣತಿ ಬಿಂಬಿಸುವಂತಿರಬೇಕು.ಈ ದೇಶದ ಪ್ರತಿಯೊಬ್ಬರ ಅಗತ್ಯಗಳನ್ನು ಪೂರೈಸಲು ನಿಖರ ಚಿತ್ರಣ ನೀಡುವಂತಿರ ಬೇಕು. ಹಾಗಿದ್ದರೆ ಇಲ್ಲಿಯವರೆಗೆ ನಡೆದ ಜನಗಣತಿ ಗಳು ಇಂತಹ ಅಂಶಗಳನ್ನು ಬಿಂಬಿಸಿಲ್ಲವೇ? ಅಂತಹ ನಿಖರ ಚಿತ್ರಣವನ್ನು ನೀಡಿಲ್ಲವೇ ಎಂದರೆ ಖಂಡಿತ ನೀಡಿವೆ. ಆದರೆ ಅದು 1931ರ ವರೆಗೆ ಮಾತ್ರ! ಯಾಕೆಂದರೆ 1931ರ ವರೆಗೆ ಮಾತ್ರ ಈ ದೇಶದಲ್ಲಿ ಜಾತಿ ಆಧಾರಿತ ಜನಗಣತಿ ನಡೆಯಿತು. ತನ್ಮೂಲಕ ದೇಶದ ಸಾಮಾಜಿಕ ವ್ಯವಸ್ಥೆಗೆ ಸ್ಪಷ್ಟ ಕನ್ನಡಿ ಹಿಡಿಯಿತು.ಅಂತಹ ಕನ್ನಡಿಯಿಂದ ಮೂಡಿದ ಬಿಂಬವನ್ನು ಆಡಳಿತಾರೂಢ ಬ್ರಿಟೀಷರಿಗೆ ತೋರಿಸಿ ‘ನೋಡಿ ನಮ್ಮ ಜನಗಳ ಸ್ಥಿತಿಗತಿ ಹೀಗಿದೆ’ ಎಂದು ಈ ದೇಶದಲ್ಲಿ ಪ್ರಪ್ರಥಮವಾಗಿ ಜಾತಿ ಆಧಾರಿತ ಜನಗಣತಿಯಿಂದ ಪ್ರಯೋಜನ ಪಡೆದ ಜನನಾಯಕನೆಂದರೆ ಡಾ. ಅಂಬೇಡ್ಕರ್ ಮಾತ್ರ. ಅಗತ್ಯವಾಗಿ ಅಂತಹ ಪ್ರಯೋಜನ ಪಡೆದ ಜನಸಮೂಹವೆಂದರೆ ಅಸ್ಪಶರು ಅಥವಾ ದಲಿತರು. ಅಸ್ಪಶರಿಗೆ ಜಾತಿ ಆಧಾರಿತ ಗಣತಿಯಿಂದ ಉಂಟಾದ ಅನುಕೂಲದ ಯಶೋಗಾಥೆಯನ್ನು ಸ್ವತಃ ಅಂಬೇಡ್ಕರ್‌ರೆ ದಾಖಲಿಸಿದ್ದಾರೆ.ಜಾತಿ ಆಧಾರಿತ ಜನಗಣತಿಯ ಬಗ್ಗೆ ಗೊಂದಲವೆದ್ದಿರುವ ಈ ದಿನಗಳಲ್ಲಿ ಅಂತಹ ಗಣತಿಯಿಂದ ಆಗುವ ಪ್ರಯೋಜನವೇನು? ಅಂತಹ ಗಣತಿ ಯಾಕೆ ಬೇಕು? ಅಂತಹ ಗಣತಿಗೆ ಯಾರಿಂದ ವಿರೋಧವಿರುತ್ತದೆ? ಅಂತಹ ವಿರೋಧಕ್ಕೆ ಉತ್ತರವೇನು? ಇತ್ಯಾದಿ ಪ್ರಶ್ನೆಗಳಿಗೆ ಅಂಬೇಡ್ಕರ್‌ರವರ ಬರಹಗಳಲ್ಲಿ ಸ್ಪಷ್ಟನೆ ಸಿಗುತ್ತದೆ. ರಾಜ್ಯ ಸರಕಾರವೇ ಪ್ರಕಟಿಸಿರುವ ಡಾ॥ಜಾತಿಯು ಈಗಲೂ ಸಹ ಭಾರತದ ಸಾಮಾಜಿಕ ಪಾತಳದ ಅಡಿಗಲ್ಲು ಎನ್ನುತ್ತಾರೆ.

ಆದ್ದರಿಂದ ಜಾತಿಯ ದಾಖಲಾತಿ ಯು ಭಾರತೀಯ ಸಮಾಜದ ವಿವಿಧ ಸಾಮಾಜಿಕ ಸ್ತರಗಳಲ್ಲಿ ಉಂಟಾಗಿರುವ ಬದಲಾವಣೆಗಳಿಗೆ ಅತ್ಯುತ್ತಮವಾದ ಕೈಪಿಡಿಯಾಗಿದೆ. ಮುಂದುವರಿದು ಅಂಬೇಡ್ಕರರವರು ಹಿಂದೂ ಎಂಬ ಪದವನ್ನು ಅದರ ಅತ್ಯಂತ ವ್ಯಾಪಕವಾದ ಅರ್ಥದಲ್ಲಿ ಬಳಸಿ ನೋಡಿದರೆ ಪ್ರತಿಯೊಬ್ಬ ಹಿಂದೂವು ಒಂದು ಜಾತಿಯಲ್ಲಿ ಹುಟ್ಟಿದ್ದಾನೆ ಮತ್ತು ಆ ಜಾತಿಯು ಅವನ ಧಾರ್ಮಿಕ, ಸಾಮಾಜಿಕ, ಆರ್ಥಿಕ ಮತ್ತು ಕೌಟುಂಬಿಕ ಜೀವನವನ್ನು ತೊಟ್ಟಿಲಿನಿಂದ ಶ್ಮಶಾನ ಗುಂಡಿಯವರೆಗೆ ನಿರ್ಧರಿಸುತ್ತದೆ.

ಪಾಶ್ಚಿಮಾತ್ಯ ದೇಶಗಳಲ್ಲಿ ಸಮಾಜದ ವಿವಿಧ ಸ್ತರಗಳನ್ನು ನಿರ್ಧರಿಸುವುದರಲ್ಲಿ ಪ್ರಮುಖವಾದ ಅಂಶಗಳೆಂದರೆ ಸಂಪತ್ತು, ವಿದ್ಯಾಭ್ಯಾಸ ಮತ್ತು ಉದ್ಯೋಗ; ಇವು ಅಲ್ಲಿ ಚಲನಾತ್ಮಕವಾಗಿವೆ ಮತ್ತು ಉದಾರ ಭಾವನೆಗಳಿಂದ ಕೂಡಿವೆ. ಇದರಿಂದಾಗಿ ಹುಟ್ಟು ಮತ್ತು ವಂಶಪಾರಂಪರ್ಯತೆಯ ಸ್ಥಾನದ ಬಿಗಿ ಮುಷ್ಟಿಯನ್ನು ಅವು ಸಹವರ್ತನ ಗೊಳಿಸುತ್ತವೆ. ಭಾರತದಲ್ಲಾದರೋ ಧಾರ್ಮಿಕ ಮತ್ತು ಸಾಮಾಜಿಕ ಸ್ಥಾನಮಾನಗಳು ಹಾಗೂ ಸಾಂಪ್ರದಾಯಿಕ ಉದ್ಯೋಗಗಳು ಉಳಿದೆಲ್ಲಾ ಅಂಶಗಳನ್ನು ಬದಿಗೊತ್ತುತ್ತಿವೆ.

ಹೀಗಾಗಿ ಪಾಶ್ಚಿಮಾತ್ಯ ದೇಶಗಳಲ್ಲಿ ಜನರ ಆರ್ಥಿಕ ಅಥವಾ ಉದ್ಯೋಗ ಆಧಾರಿತ ವಿಭಜನೆಯು ಜನಗಣತಿಗಳಲ್ಲಿ ಸೂಚಿತವಾಗುವ ಅಂಕಿ ಅಂಶಗಳ ಕಲೆ ಹಾಕುವಿಕೆಗೆ ನೆರವಾಗುತ್ತವೆ. ಅದೇ ಭಾರತದ ಜನಸಂಖ್ಯೆಯ ವಿಭಜನೆಗೆ ಧರ್ಮ ಮತ್ತು ಜಾತಿಗಳ ವ್ಯತ್ಯಾಸವೇ ಆಧಾರವಾಗುತ್ತದೆ. ರಾಷ್ಟ್ರೀಯವಾಗಿ ಮತ್ತು ಸಾಮಾಜಿಕವಾಗಿ ಜಾತಿ ಎಂಬ ಸಂಸ್ಥೆಯನ್ನು ನಾವು ಯಾವರೀತಿಯಲ್ಲಿ ವ್ಯಾಖ್ಯಾನಿಸಿದರು ಸರಿಯೇ, ಅದನ್ನು ತಳ್ಳಿಹಾಕಿ ಪ್ರಯೋಜನವಿಲ್ಲ; ಎಲ್ಲಿಯವರೆಗೆ ಒಬ್ಬನ ಅಧಿಕೃತ ಮತ್ತು ಸಾಮಾಜಿಕ ವ್ಯಕ್ತಿತ್ವದ ಭೇದಾತ್ಮಕ ಲಕ್ಷಣಗಳನ್ನು ಗುರುತಿಸಲು ಜಾತಿಯನ್ನು ಬಳಸುವುದು ಮುಂದುವರಿಯುತ್ತದೆಯೋ ಅಲ್ಲಿಯವರೆಗೆ ಜನಗಣತಿಯಲ್ಲಿ ಜಾತಿಯನ್ನು ನಮೂದಿಸುವುದು ಅಪೇಕ್ಷಣಿಯ ಮತ್ತು ಹಾಗೆ ನಮೂದಿಸುವುದರಿಂದ ಜಾತಿಯತೆಯನ್ನು ಮುಂದುವರಿಸಿದ ಹಾಗೆ ಆಗುತ್ತದೆ ಎಂಬ ವಾದದಲ್ಲಿ ಯಾವುದೇ ಹುರುಳಿಲ್ಲ ಎನ್ನುತ್ತಾರೆ.

ಮುಂದುವರಿದು ಅಂಬೇಡ್ಕರರವರು ಜನಗಣತಿಯು ಅಸ್ಪಶರನ್ನು ಗುರುತಿಸಿದ ಬಗೆಯನ್ನು ವಿವರಿಸುತ್ತಾ ಹೀಗೆ ಬರೆಯುತ್ತಾರೆ. 1911 ರ ಜನಗಣತಿಯು ಒಂದು ಹೆಜ್ಜೆ ಮುಂದೆ ಹೋಗಿ ಸ್ಪಶ್ಯರಿಂದ ಅಸ್ಪಶರನ್ನು ಹೊರತು ಪಡಿಸಿ ಗುರುತಿಸಲು ಬೇಕಾದ ಹತ್ತು ಸೂತ್ರಗಳನ್ನು ರೂಪಿಸಿತು.

ಈ ಸೂತ್ರಗಳ ಪ್ರಕಾರ ಜನಗಣತಿಯ ಮೇಲ್ವಿಚಾರಕರು ಶೋಷಿತ ಜಾತಿಗಳ ಮತ್ತು ಬುಡಕಟ್ಟುಗಳ ನಮೂದನೆಯನ್ನು ಕೆಳಕಂಡಂತೆ ಮಾಡಿದರು..

1) ಬ್ರಾಹ್ಮಣರ ಶ್ರೇಷ್ಠತೆಯನ್ನು ನಿರಾಕರಿಸುವವರು.

2) ಬ್ರಾಹ್ಮಣ ಅಥವಾ ಇತರ ಹಿಂದೂ ಗುರುಗಳಿಂದ ಮಂತ್ರವನ್ನು ಸ್ವೀಕರಿಸದವರು.

3) ವೇದಗಳ ಶ್ರೇಷ್ಟತೆಯನ್ನು ನಿರಾಕರಿಸುವವರು.

4) ಪ್ರಮುಖ ಹಿಂದೂ ದೇವತೆಗಳನ್ನು ಪೂಜೆ ಮಾಡದವರು.

5) ಕಟ್ಟಾ ಬ್ರಾಹ್ಮಣರಿಂದ ಸೇವೆ ಪಡೆಯದವರು.

6) ಬ್ರಾಹ್ಮಣ ಪೂಜಾರಿಗಳನ್ನೇ ಹೊಂದದವರು.

7) ಸಾಮಾನ್ಯ ದೇವಾಲಯಕ್ಕೆ ಪ್ರವೇಶ ಇಲ್ಲದವರು.

8) ಕೇವಲ ಸ್ಪರ್ಶದಿಂದ ಮಾತ್ರ ಮಾಲಿನ್ಯ ಉಂಟುಮಾಡುವವರು.

9) ಸತ್ತವರನ್ನು ಹೂಳುವವರು ಮತ್ತು.

10) ಗೋವನ್ನು ಪೂಜಿಸದವರು ಮತ್ತು ಗೋಮಾಂಸವನ್ನು ತಿನ್ನುವವರು.

ಹೀಗೇ ಅಂಬೇಡ್ಕರರವರು ಆ ಸೂತ್ರಗಳನ್ನು ಮಂಡಿಸುತ್ತಾರೆ. ಜನಗಣತಿಯ ಈ ಸೂತ್ರದಿಂದ ಅಸ್ಪಶರಿಗಾದ ಪ್ರಯೋಜನವೆಂದರೆ ಅಸ್ಪಶರನ್ನು ಸ್ಪಶ್ಯ ಹಿಂದೂಗಳಿಂದ ಬೇರ್ಪಡಿಸಿತು. ತನ್ಮೂಲಕ ಅಸ್ಪಶ್ಯರಿಗೆ ತಮ್ಮ ಜನಸಂಖ್ಯೆಯ ಆಧಾರದ ಮೇಲೆ ಪ್ರಾತಿನಿಧ್ಯ ಕೇಳಲು ಒಂದು ವೇದಿಕೆಯನ್ನು ಸೃಷ್ಟಿಸಿತು. ಇದರ ಪ್ರಕಾರ 1930 ರಲ್ಲಿ ಭೇಟಿ ನೀಡಿದ ಸೈಮನ್ ಆಯೋಗವು ಅಸ್ಪಶರ ಜನಸಂಖ್ಯೆ 4 ಕೋಟಿ 45 ಲಕ್ಷ ಎಂದಿದೆ.

ಮುಂದೆ ಇದರ ಆಧಾರದ ಮೇಲೆ ಅಂಬೇಡ್ಕರ್ ಶಾಸನ ಸಭೆಗಳಲ್ಲಿ ಅಸ್ಪಶರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಸೈಮನ್ ಆಯೋಗಕ್ಕೆ ಮನವಿ ಸಲ್ಲಿಸಿದ್ದು, ದುಂಡುಮೇಜಿನ ಸಭೆಗಳಲ್ಲಿ ಪ್ರತ್ಯೇಕ ಮತದಾನ ಪದ್ಧತಿ ಬೇಕೆಂದು ಒತ್ತಾಯಿಸಿದ್ದು, ಪರಿಣಾಮವಾಗಿ 1932 ರ ಪೂನಾ ಒಪ್ಪಂದದಲ್ಲಿ ಅಸ್ಪಶ್ಯರಿಗೆ ಜಂಟಿ ಚುನಾಯಿತ ವ್ಯವಸ್ಥೆ ಜಾರಿಯಾದದ್ದು, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಜಾರಿಯಾದದ್ದು, ಈ ಎಲ್ಲಾ ಅಂಶಗಳು 1935ರ ಭಾರತ ಸರಕಾರ ಕಾಯಿದೆಯಲ್ಲಿ ಶಾಸನವಾಗಿ ರೂಪಿತಗೊಂಡು ಜಾರಿಗೆ ಬಂದಿದ್ದು ಈಗ ಇತಿಹಾಸ.

ಅಸ್ಪಶರ ಕರಾಳ ಇತಿಹಾಸದ ಪುಟಗಳಲ್ಲಿ ಇಂತಹ ಭವ್ಯ ಇತಿಹಾಸದ ಪುಟ ಸೃಷ್ಟಿಯಾದದ್ದು, ಅವರ ಹಣೆಬರಹ ಬದಲಾದದ್ದು ಖಂಡಿತ ಜಾತಿ ಆಧಾರಿತ ಜನಗಣತಿಯಿಂದ. ಅವರ ಸಮಗ್ರ ಸಾಮಾಜಿಕ ಆರ್ಥಿಕ ಸ್ಥಿತಿಗತಿಯನ್ನು ಅದು ವ್ಯವಸ್ಥೆಗೆ ಸ್ಪಷ್ಟವಾಗಿ ಬಿಂಬಿಸಿತು. ತನ್ಮೂಲಕ ಅಸ್ಪಶರ ಪುರೋಭಿವೃದ್ಧಿಗೆ ನಾಂದಿ ಹಾಡಿತು. ದುರಂತವೆಂದರೆ 1931 ರವರೆಗೂ ನಡೆದ ಈ ಜಾತಿ ಆಧಾರಿತ ಜನಗಣತಿ ನಂತರ ಇಲ್ಲಿಯವರೆಗೆ ಯಾಕೆ ನಡೆದಿಲ್ಲ? ಅದರಲ್ಲೂ ಸ್ವಾತಂತ್ರ್ಯ ಭಾರತದಲ್ಲಿ ಒಮ್ಮೆಯೂ ಜಾತಿ ಆಧಾರಿತ ಜನಗಣತಿ ನಡೆದಿಲ್ಲಾ ಯಾಕೆ? ಏನೆ ಆಗಲಿ ಈ ಎಲ್ಲಾ ಪ್ರಶ್ನೆಗಳಿಗೆ ಹೆಚ್ಚು ಕಡಿಮೆ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಈ ದೇಶವನ್ನು ಆಳಿರುವ ಕಾಂಗ್ರೆಸ್ ಮತ್ತು ಇತರ ಸ್ಥಾಪಿತ ಹಿತಾಸಕ್ತಿಗಳ ಪರವುಳ್ಳ ಪಕ್ಷಗಳು ಮತ್ತು ವ್ಯಕ್ತಿಗಳೇ ಉತ್ತರಿಸ ಬೇಕು.

1931 ರವರೆಗಿನ ಜನಗಣತಿಯಿಂದ ಅಸ್ಪಶರು ಪ್ರಯೋಜನ ಪಡೆದ ಹಾಗೆ ಎಲ್ಲಿ ಇತರೆ ಹಿಂದುಳಿದ ವರ್ಗಗಳು ಅರ್ಥಾತ್ ಓ.ಬಿ.ಸಿಗಳು ಅದೇ ದಾರಿಯಲ್ಲಿ ಸಾಗುತ್ತಾರೋ ಎಂದು ಸ್ಥಾಪಿತ ಹಿತಾಸಕ್ತಿಗಳು ಎಚ್ಚೆತ್ತುಕೊಂಡವೆ? ಆ ನಿಟ್ಟಿನಲ್ಲಿ ಜನಗಣತಿಯ ಹೃದಯದಂತಿದ್ದ ಜಾತಿ ಆಧಾರ ಎಂಬ ಅಂಶವನ್ನು ಇಂತಹ ಹಿತಾಸಕ್ತಿಗಳು ಕಿತ್ತು ಬಚ್ಚಿಟ್ಟವೆ? ಅಥವಾ ಅಸಂಘಟಿತ ಓ.ಬಿ.ಸಿಗಳಿಗೆ ಇದರ ತಿರುಳು ಅರ್ಥವಾಗಲಿಲ್ಲವೇ? ಖಂಡಿತ ಇವೆಲ್ಲಾ ಕ್ರೂರ ಅನುಮಾನ ಹುಟ್ಟಿಸುವ ಪ್ರಶ್ನೆ ಗಳು ಮತ್ತು ಆ ಪ್ರಶ್ನೆಗಳಿಗೆ ಉತ್ತರಿಸ ಬೇಕಾದವರು ಮತ್ತದೆ ಪಕ್ಷಗಳು ಮತ್ತು ವ್ಯಕ್ತಿಗಳು.

ಮಂಡಲ್ ವರದಿ ಜಾರಿಯಾಗಿರುವ ಈ ದಿನಗಳಲ್ಲಿ ಖಂಡಿತ ಓ.ಬಿ.ಸಿಗಳಿಗೆ ಲಭ್ಯವಾಗಬೇಕಾದ ಪ್ರಯೋಜನಗಳು ಇನ್ನಷ್ಟು ವ್ಯವಸ್ಥಿತವಾಗಿ, ಪರಿಣಾಮಕಾರಿಯಾಗಿ ತಲುಪಬೇಕು. ಅದಕ್ಕಾಗಿ ಜಾತಿ ಆಧಾರಿತ ಜನಗಣತಿ ಬೇಕೇ ಬೇಕು. ಈ ನಿಟ್ಟಿನಲ್ಲಿ ತಡವಾಗಿಯಾದರೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ಹೆಜ್ಜೆ ಇಡಲಿ. ಅರವತ್ತು ವರ್ಷಗಳಿಂದ ಆಗಿರುವ ವಂಚನೆಗೆ ಈಗಲಾದರು ಪ್ರಾಯಶ್ಚಿತ ಸಿಗಲಿ. ತನ್ಮೂಲಕ ಈ ಬಾರಿ ಜಾತಿ ಆಧಾರಿತ ಜನಗಣತಿ ನಡೆಯಲೇಬೇಕು ಎಂಬುದಷ್ಟೆ ಸದ್ಯದ ಕಳಕಳಿ. ಹಾಗೇ ಆಗುತ್ತದೆಯೇ? ಕಾದು ನೋಡೋಣ

* ರಘೋತ್ತಮ ಹೊ. ಬ. ಚಾಮರಾಜನಗರ

Raghothama, Chamarajanagar

ಶುಕ್ರವಾರ – ಮೇ -28-2010

refer:varthabharathi